ಪಂಚಾಯತ್ ಸಿಬ್ಬಂದಿಯ‌ ಪತಿಯಿಂದ ಹಲ್ಲೆ ಆರೋಪ – ಪಂಚಾಯತ್ ಸದಸ್ಯ ಆಸ್ಪತ್ರೆಗೆ ದಾಖಲು 

0

ಪುತ್ತೂರು:  ಹಿರೇಬಂಡಾಡಿ ಪಂಚಾಯತ್ ಕಚೇರಿಯ ಸಿಬ್ಬಂದಿಯ ಪತಿಯೊಬ್ಬರು ನನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಂಚಾಯತ್ ಸದಸ್ಯ ಸತೀಶ್ ಎನ್ ಶೆಟ್ಟಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸೆ.29 ರಂದು ಹಿರೇಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ನನ್ನ ಮೇಲೆ ವಿನಾಃ ಕಾರಣ ಜನ ಬಿಟ್ಟು ಹಲ್ಲೆ ನಡೆಸಿದ್ದಾರೆ. ಮಹಿಳಾ ಸಿಬ್ಬಂದಿಯ ಪತಿ ನನಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಸಹಿತ ಹಲವಾರು ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.

LEAVE A REPLY

Please enter your comment!
Please enter your name here