ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಕ್ಕಾಗಿ ಪುತ್ತೂರು ಬ್ಲಾಕ್‌ನಿಂದ ಗುಂಡ್ಲುಪೇಟೆಗೆ ತೆರಳಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು

0

  • ಅಮ್ಚಿನಡ್ಕದಲ್ಲಿ ಬಸ್ ಯಾತ್ರೆಗೆ ಚಾಲನೆ

ಪುತ್ತೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆ.30ರಂದು ಕರ್ನಾಟಕದ ರಾಜ್ಯದ ಗುಂಡ್ಲುಪೇಟೆಗೆ ಆಗಮಿಸಲಿದ್ದು ಯಾತ್ರೆಯಲ್ಲಿ ಭಾಗವಹಿಸುವುದಕ್ಕಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಿಂದ ನೂರಾರು ಕಾರ್ಯಕರ್ತರು ಗುಂಡ್ಲುಪೇಟೆಗೆ ತೆರಳಿದ್ದಾರೆ.

ಸೆ.29ರಂದು ಸಂಜೆ ಅಮ್ಚಿನಡ್ಕದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈ ಅವರು ತೆಂಗಿನ ಕಾಯಿ ಒಡೆದ ಬಳಿಕ ಭಾರತ್ ಜೋಡೋ ಯಾತ್ರೆಯ ಸಂಯೋಜಕರಾದ ದಿವ್ಯಪ್ರಭಾ ಗೌಡ ಚಿಲ್ತಡ್ಕರವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಅಮಲ ರಾಮಚಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಮಾರು ೧೫ ಬಸ್‌ಗಳಲ್ಲಿ ನೂರಾರು ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಗೆ ತೆರಳಿದರು. ಅಲ್ಲದೇ ಕಾರು ಮತ್ತು ಇತರ ವಾಹನಗಳಲ್ಲಿಯೂ ಹಲವರು ತೆರಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ, ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ರಾಹುಲ್ ಗಾಂಧಿಯವರಿಗೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈಯವರಿಗೆ ಹಾಗೂ ಭಾರತ್ ಜೋಡೋ ಯಾತ್ರೆಯ ಸಂಯೋಜಕಿ ದಿವ್ಯಪ್ರಭಾ ಗೌಡ ಚಿಲ್ತಡ್ಕರವರಿಗೆ ಕಾರ್ಯಕರ್ತರು ಜೈಕಾರ ಘೋಷಣೆ ಕೂಗಿದರು.

LEAVE A REPLY

Please enter your comment!
Please enter your name here