ಬಿಜೆಪಿ ಗ್ರಾಮಾಂತರ ಮಂಡಲ, ನಗರ ಮಂಡಲದಿಂದ ನರೇಂದ್ರ ಮೋದಿ ಜನ್ಮದಿನಾಚರಣೆಯ ಸೇವಾ ಪಾಕ್ಷಿಕ ಕಾರ್ಯಕ್ರಮ

0

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ, ನಗರ ಮಂಡಲದಿಂದ ನರೇಂದ್ರ ಮೋದಿ ಜನ್ಮದಿನಾಚರಣೆಯ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮಡಿಯಲ್ಲಿ ಇಲ್ಲಿನ ಮುಳಿಯ ನೆಸ್ಟ್ ನಲ್ಲಿರುವ ಗಾಯತ್ರಿ ಸ್ವದೇಶಿ ಮಳಿಗೆಯಲ್ಲಿ ಖಾದಿ ಉತ್ಸವ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮ ಆ.2ರಂದು ನಡೆಯಿತು.


ಶಾಸಕ ಸಂಜೀವ‌ ಮಠಂದೂರು ಅವರು ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಬಳಿಕ ಅವರು ಖಾದಿ ಬಟ್ಟೆಯ ಪ್ರಥಮ ಖರೀದಿದಾರರಾಗಿ ಖಾದಿ ಉತ್ಸವಕ್ಕೆ ಚಾಲನೆ ನೀಡಿದರು‌.


ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ನಗರಸಭೆ ಸದಸ್ಯೆ ದೀಕ್ಷಾ ಪೈ, ಮಾಜಿ ಸದಸ್ಯೆ ಸ್ವರ್ಣಲತಾ ಹೆಗ್ಡೆ, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಗಾಯತ್ರಿ ಸಹಕಾರಿ ಸಂಘದ ನಿರ್ದೇಶಕಿ ಶರಾವತಿ ರವಿನಾರಾಯಣ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್, ಶಿವಪ್ರಸಾದ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು‌. ಈ ಸಂದರ್ಭದಲ್ಲಿ ಆಗಮಿಸಿದವರೆಲ್ಲಾ ಖಾದಿ ಉತ್ಪನ್ನಗಳನ್ನು ಖರೀದಿಸಿದರು

LEAVE A REPLY

Please enter your comment!
Please enter your name here