ರಾಮಕುಂಜೇಶ್ವರ ಪ.ಪೂ. ಕಾಲೇಜಿನಲ್ಲಿ ಗಾಂಧಿಜಯಂತಿ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀ ಜಯಂತಿ ಆಚರಣೆಯು ನಡೆಯಿತು.

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಸತೀಶ್ ಭಟ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾತ್ಮ ಗಾಂಧೀಜಿಯವರು ರಾಷ್ಟ್ರದ ಪಿತ. ಅವರ ಸಮರ್ಪಣೆಯ ಫಲವನ್ನೇ ನಾವಿಂದು ಸವಿಯುತ್ತೆದ್ದೇವೆ. ಅದಲ್ಲದೆ ಇಂದು ನಮ್ಮ ಹೆಮ್ಮೆಯಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜೀಯವರ ಹುಟ್ಟು ಹಬ್ಬವೂ ಹೌದು. ಹಾಗಾಗಿ ಇಂದು ಈ ಮಹಾತ್ಮರನ್ನು ನೆನೆಯೋಣ, ಅವರ ಆದರ್ಶಗಳನ್ನು ಪಾಲಿಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ., ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಕಾಲೇಜಿನ ಉಪನ್ಯಾಸಕ-ಉಪನ್ಯಾಸಕೇತರವೃಂದ, ಪ್ರೌಢಶಾಲೆಯ ಅಧ್ಯಾಪಕ-ಅಧ್ಯಾಪಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here