ಮರದ ದಿಮ್ಮಿಯೇರಿದ ಕಾರು: ಚಾಲಕ ಪಾರು

0

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ಮರದ ದಿಮ್ಮಿಯನ್ನೇರಿ ನಿಂತ ಘಟನೆ ಅ. 2ರಂದು ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಈ ಕಾರು ಅಪಘಾತಕ್ಕೀಡಾದ ವೇಳೆ ಕಾರಿನಲ್ಲಿದ್ದವರೆಲ್ಲರೂ ಪವಾಡಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here