ಶಿರಾಡಿ: ಗ್ರಾ.ಪಂ., ಕೆಎಸ್‌ಎಂಸಿಎ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ನೆಲ್ಯಾಡಿ: ಶಿರಾಡಿ ಗ್ರಾಮ ಪಂಚಾಯತ್ ಹಾಗೂ ಕೆಎಸ್‌ಎಂಸಿಎ ಜಂಟಿ ಆಶ್ರಯದಲ್ಲಿ ಅ.2ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಶಿರಾಡಿ ಗ್ರಾ.ಪಂ.ಅಧ್ಯಕ್ಷೆ ವಿನಿತಾ ಎಂ.ಬಿ., ಪಿಡಿಒ ವೆಂಕಟೇಶ್ ಪಿ., ಕೆಎಸ್‌ಎಂಸಿಎ ಅಧ್ಯಕ್ಷ ಪ್ರವೀಣ್ ಕೆ.ಟಿ., ಶಿರಾಡಿ ಸೈಂಟ್ ಜೋಸೆಫ್ ಚರ್ಚ್‌ನ ಧರ್ಮಗುರು ರೆ.ಫಾ. ಜೋಸೆಫ್ ಪಂಬಕ್ಕಲ್, ಧರ್ಮಭಗಿನಿಯರು, ಸದಸ್ಯರು, ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನಿಂದ ಗುಂಡ್ಯ ಪೊಲೀಸ್ ಚೆಕ್‌ಪೋಸ್ಟ್ ತನಕ ರಸ್ತೆಯ ಉದ್ದಕ್ಕು ಬಿದ್ದಿದ್ದ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. 100ಕ್ಕೂ ಮಿಕ್ಕಿ ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here