ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಣೆಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

0

ಕಾಣಿಯೂರು : ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲ ಭವನ ಸಮಿತಿ ಪುತ್ತೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛ ರಿ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಚಿತ್ರಕಲೆ ಸ್ಪರ್ಧೆಯನ್ನು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ, ದರ್ಬೆ ಪುತ್ತೂರು ಇಲ್ಲಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .ಇದರಲ್ಲಿ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಬಹುಮಾನವನ್ನು ಪಡೆದುಕೊಂಡಿರುತ್ತಾರೆ.


5 ರಿಂದ 8 ವರ್ಷದೊಳಗಿನ ಮಕ್ಕಳಲ್ಲಿ ಸಹರ್ಷ್ ವಿ. ರೈ ಮೂರನೇ ತರಗತಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಪ್ರಗತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಮತ್ತು ಶಿಕ್ಷಕಿ ಕವಿತಾ ವಿ ರೈ ದಂಪತಿಗಳ ಪುತ್ರ.
9 ರಿಂದ 12 ವರ್ಷದೊಳಗಿನ ಮಕ್ಕಳಲ್ಲಿ ಸಾನ್ವಿ ಶೆಟ್ಟಿ, ಆರನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕುಕೈಕೋಡಿ ಸುಧೀರ್ ಕುಮಾರ್ ಶೆಟ್ಟಿ ಮತ್ತು ನಯನ ಎಸ್. ಟಿ ದಂಪತಿಗಳ ಪುತ್ರಿ. 13 ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಶ್ರದ್ಧಾ ಕೆ ಡಿ 8ನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ .ಇವರು ಕಡಬ ತಾಲೂಕಿನ ಚಾರ್ವಕ ಗ್ರಾಮದ ಉದನಡ್ಕ ಕೆ ಕೆ ದೊಡ್ಡಯ್ಯ ಗೌಡ ಮತ್ತು ರಾಜೇಶ್ವರಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here