ಪಡಿಲ್ ಚೈತನ್ಯ ಮಿತ್ರವೃಂದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ

0

ಪುತ್ತೂರು: ಪಡೀಲ್ ಚೈತನ್ಯ ಮಿತ್ರ ವೃಂದದಲ್ಲಿ ಅ.2ರಂದು ಗಾಂಧಿ ಜಯಂತಿ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಚೈತನ್ಯ ಮಿತ್ರವೃಂದದ ನೂತನ ಕಛೇರಿಯನ್ನು ಪುತ್ತೂರು ವಲಯ ಅರಣ್ಯ ಇಲಾಖೆಯ ನಿವೃತ್ತ ನೌಕರರಾದ ಕಿಟ್ಟಪ್ಪ ಗೌಡರವರು ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ರವರು ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ದಿಶಾ ನಾಮನಿರ್ದೇಶಿತ ಸದಸ್ಯ ರಾಮ್ ದಾಸ್ ಹಾರಾಡಿರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಗರಸಭಾ ಸ್ಥಳೀಯ ಸದಸ್ಯ ಪದ್ಮನಾಭ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ನಗರಸಭಾ ಮಾಜಿ ಅಧ್ಯಕ್ಷ ವಾಣಿ ಶ್ರೀಧರ್, ಧರ್ಮಸ್ಥಳ ಸ್ವಸಹಾಯ ಸಂಘಗಳ ಪಡೀಲ್ ಒಕ್ಕೂಟದ ಅಧ್ಯಕ್ಷ ಮೈಮುನ, ಸಂಸ್ಥೆಯ ಸದಸ್ಯರಾದ ಜಯರಾಮ ಗೌಡ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಪುರಂದರ ಪಡೀಲ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here