ಅಡಕೆ ಚುಕ್ಕೆ ರೋಗ: ನಿರ್ಮೂಲನಾ ಕ್ರಮಕೈಗೊಳ್ಳಲು ರಾಜ್ಯ ಸರಕಾರದಿಂದ ರೈತರಿಗೆ ಸಹಾಯಧನ

0

ಬೆಂಗಳೂರು:ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿನ ಅಡಕೆ ಮರಗಳಲ್ಲಿ ಕಾಣಿಸಿಕೊಂಡಿರುವ ಚುಕ್ಕೆ ಎಲೆ ರೋಗ ಸಮಸ್ಯೆಗೆ ಸಿಲುಕಿರುವ ರೈತರಿಗೆ ರೋಗ ನಿರ್ಮೂಲನಾ ಕ್ರಮಗಳನ್ನು ಅಳವಡಿಸಿಕೊಳ್ಳುವ ಸಲುವಾಗಿ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದೆ ಬಂದಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಚುಕ್ಕೆ ಎಲೆ ರೋಗ ಸಮಸ್ಯೆಗೆ ಸಿಲುಕಿರುವ ರೈತರಿಗೆ ತಕ್ಷಣಕ್ಕೆ ಪರಿಹಾರ ವಿತರಣೆ ಮಾಡಲು 4 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.ರೋಗ ನಿಯಂತ್ರಣಕ್ಕಾಗಿ 8 ಕೋಟಿ ರೂ.ಗಳ ಅನುದಾನ ನಿಗದಿ ಮಾಡಲಾಗಿದ್ದು ಅದರಲ್ಲಿ 4 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರ ನೀಡುವ ಸಲುವಾಗಿ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಸರಕಾರ ಆದೇಶ ಹೊರಡಿಸಿದೆ.ಸದ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್ ಗ್ಲೋಯೋಸ್ಪೊರಿಯೊಯಿಡ್ಸ್ ಎಂಬ ಶಿಲೀಂಧ್ರದಿಂದ ಎಲೆ ಚೆಕ್ಕು ರೋಗವು ತೀವ್ರವಾಗಿ ಗಾಳಿಯಲ್ಲಿ ಹರಡುತ್ತಿದೆ.ಈ ರೋಗವು ಶೀಘ್ರಗತಿಯಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ತೋಟಗಾರಿಕೆ ಸಚಿವರು, ಗೃಹ ಸಚಿವರು, ಮೀನುಗಾರಿಗೆ ಸಚಿವರೊಂದಿಗೆ ನಡೆದ ಸಭೆಯಲ್ಲಿ ಹಾನಿಗೊಳಗಾದ ಅಡಕೆ ತೋಟಗಳ ಮೊದಲನೇ ಸಿಂಪಡಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ.ರೋಗ ನಿಯಂತ್ರಣಕ್ಕಾಗಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಅನುಮೋದನೆಗೊಂಡಿರುವ ವಿತರಕರು, ಉತ್ಪಾದಕ ಕಂಪನಿಗಳ ಮೂಲಕ ಗುಣಮಟ್ಟವುಳ್ಳ ಸಸ್ಯ ಸಂರಕ್ಷಣೆ ಔಷಽಗಳನ್ನು ರೈತರಿಗೆ ಉಚಿತವಾಗಿ ವಿತರಣೆ ಮಾಡಲು 4 ಕೋಟಿ ರೂ.ಗಳನ್ನು ಬಳಸಿಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆಂದು ಹೇಳಲಾಗಿದೆ.

ಹೆಕ್ಟೇರ್‌ಗೆ ರೂ. 4,೦೦೦/-

ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಸುಮಾರು 20,534.50 ಹೆಕ್ಟೇರ್ ಪ್ರದೇಶದಲ್ಲಿರುವ ಅಡಕೆ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ಪ್ರತಿ ಹೆಕ್ಟೇರ್‌ಗೆ 4,೦೦೦ ರೂ.ಗಳಂತೆ ಸಹಾಯಧನ ನೀಡಲು ಸೂಚಿಸಲಾಗಿದೆ ಎಂದು ಸರಕಾರದ ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here