ಬೆಳಂದೂರು ಗ್ರಾ.ಪಂ ವಿಶೇಷ ಗ್ರಾಮ ಸಭೆ, ಗಾಂಧಿ ಜಯಂತಿ, ಸ್ವಚ್ಛತ್ತಾ ಹೀ ಸೇವೆ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮನೆ ಮನೆಗೆ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆಯು ಮತ್ತು ಗಾಂಧಿ ಜಯಂತಿ, ಲಾಲ್ ಬಹದ್ಧೂರ್ ಶಾಸ್ತ್ರಿ ಜನ್ಮಾದಿನಾಚರಣೆ ಮತ್ತು ಸ್ವಚ್ಛತ್ತಾ ಹೀ ಸೇವಾ ಕಾರ್ಯಕ್ರಮ ಅ.2ರಂದು ಬೆಳಂದೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ತೇಜಾಕ್ಷಿ ಕೊಡಂಗೆ, ಸದಸ್ಯರುಗಳಾದ ಮೋಹನ್ ಅಗಳಿ, ವಿಠಲ ಗೌಡ ಅಗಳಿ, ರವಿಕುಮಾರ್ ಕೆಡೆಂಜಿ, ಜಯಂತ ಅಬೀರ, ಪ್ರವೀಣ್ ಕೆರೆನಾರು, ಪಾರ್ವತಿ ಮರಕ್ಕಡ, ತಾರಾ ಅನ್ಯಾಡಿ, ಹರಿಣಾಕ್ಷಿ ಬನಾರಿ, ಉಪಸ್ಥಿತರಿದ್ದರು. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here