ಕಾಣಿಯೂರು: ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಚತ್ತಾ ಹೀ ಸೇವಾ ಕಾರ್ಯಕ್ರಮ

0

ಕಾಣಿಯೂರು: ಬಿಜೆಪಿ ಸುಳ್ಯ ಮಂಡಲ, ಬಿಜೆಪಿ ಮಹಾಶಕ್ತಿ ಕೇಂದ್ರ ಸವಣೂರು ಇದರ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ಧೂರು ಶಾಸ್ತ್ರೀ ಜನ್ಮಾದಿನಾಚರಣೆ ಪ್ರಯುಕ್ತ ಸ್ವಚ್ಚತ್ತಾ ಹೀ ಸೇವಾ ಕಾರ್ಯಕ್ರಮವು ಕಾಣಿಯೂರಿನಲ್ಲಿ ನಡೆಯಿತು.

ಕಾಣಿಯೂರು ಗ್ರಾ.ಪಂ. ಮತ್ತು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಮುತ್ತ ಸ್ವಚ್ಛತ್ತೆ ಮಾಡಲಾಯಿತು. ಈ ಸಂದರ್ಭದಲ್ಲಿ ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾ.ಪಂ, ಅಧ್ಯಕ್ಷೆ ಲಲಿತಾ ದರ್ಖಾಸು, ಕಾಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು, ಚಾರ್ವಾಕ ಹಾ.ಉ.ಸ.ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ ದೇವಿನಗರ, ಕಾಣಿಯೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ಬೆದ್ರಾಜೆ, ನಾಣಿಲ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಉದ್ಲಡ್ಡ, ದೋಳ್ಪಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ದೇವಿಪ್ರಸಾದ್ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಕೀರ್ತಿಕುಮಾರಿ ಅಂಬುಲ, ಸುಲೋಚನಾ ಮೀಯೊಳ್ಪೆ, ತೇಜಕುಮಾರಿ ಉದ್ಲಡ್ಡ, ಅಂಬಾಕ್ಷಿ ಕೂರೇಲು, ಕಾಣಿಯೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ, ಯತೀಶ್ ಮತ್ತೀತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here