ಐತ್ತೂರು ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಸ್ವಚ್ಛತಾ ಕಾರ್ಯಕ್ರಮ

0

ಸ್ವಚ್ಛ ವಾಹಿನಿ ವಾಹನ ಚಲಾಯಿಸಿ ತ್ಯಾಜ್ಯ ವಿಲೇವಾರಿ ಮಾಡಿದ ಪಿಡಿಓ..!

ಕಡಬ: ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ, ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ಅ.2ರಂದು ನಡೆಯಿತು.

ಗ್ರಾ.ಪಂ ಅಧ್ಯಕ್ಷೆ ಶ್ಯಾಮಲಾ ಕೆ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ, ಸದಸ್ಯರಾದ ಕುರಿಯನ್, ಈರೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ಧೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾ ವಿಧಿ ಇದೇ ಸಂದರ್ಭದಲ್ಲಿ ನೆರವೇರಿಸಲಾಯಿತು. ಸಭೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು.

ಸ್ವಚ್ಛತಾ ವಾಹನ ಚಲಾಯಿಸಿದ ಪಿಡಿಓ:

ಸಭೆ ಬಳಿಕ ಗ್ರಾ.ಪಂ.ನಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾ.ಪಂ ವಠಾರದಲ್ಲಿ ಮತ್ತು ಪೇಟೆ ಬದಿಯಲ್ಲಿ ಸ್ವಚ್ಛತೆ ನಡೆಸಲಾಯಿತು. ಸ್ವಚ್ಛತಾ ವಾಹನದ ಚಾಲಕರ ಅನುಪಸ್ಥಿತಿಯಿದ್ದ ಹಿನ್ನೆಲೆಯಲ್ಲಿ ಗ್ರಾ.ಪಂ ಪಿಡಿಓ ಸುಜಾತ ಕೆ ಅವರು ಸ್ವತಃ ವಾಹನ ಚಲಾಯಿಸುವ ಮೂಲಕ ತ್ಯಾಜ್ಯ ವಿಲೇವಾರಿ ಮಾಡಿ ಗಮನ ಸೆಳೆದರು.

LEAVE A REPLY

Please enter your comment!
Please enter your name here