ಆಲ್ ಇಂಡಿಯಾದಲ್ಲಿ ರ್ಯಾಂಕ್ ಗಳಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಹೃಷಿಕೇಶ್ ಭಟ್

0

ಪುತ್ತೂರು; ಪುತ್ತೂರಿನ ವಿವೇಕಾನಂದ ಕಾಲೇಜಿನ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಹೃಷಿಕೇಶ್ ಭಟ್ ಅವರು ಇನ್ಸ್ಟಿಟ್ಯೂಟ್ ಆಫ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎಂಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದು ಆಲ್ ಇಂಡಿಯಾದಲ್ಲಿ 23 ನೇ ರ್ಯಾಂಕ್ ಗಳಿಸಿರುತ್ತಾರೆ.

ಹಾಗೆಯೇ ಕರ್ನಾಟಕದಲ್ಲಿ ಎರಡನೇಯ ರ್ಯಾಂಕ್ ಗಳಿಸಿರುತ್ತಾರೆ.ಮೂಲತಃ ಪುತ್ತೂರಿನವರಾಗಿರುವ ಇವರು ರತ್ನಾಕರ್ ಭಟ್ ಹಾಗೂ ವಿನಯ ಭಟ್ ದಂಪತಿಗಳ ಪುತ್ರ.ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಕಾಂ ವ್ಯಾಸಾಂಗ ಮಾಡುತ್ತಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಉಪನ್ಯಾಸಕೇತರ ವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here