ಪುಣ್ಚಪ್ಪಾಡಿ ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

0

ಸವಣೂರು : ಸವಣೂರು ಗ್ರಾ.ಪಂ.ವ್ಯಾಪ್ತಿಯ ಪುಣ್ಚಪ್ಪಾಡಿಯಲ್ಲಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು. ಕಡಬ, ಪುತ್ತೂರು ತಾ.ಪಂ. ಕಾರ್ಯ ನಿರ್ವಾಹಕಾಧಿಕಾರಿ ನವೀನ್ ಭಂಡಾರಿ ಅವರು ಗುದ್ದಲಿ ಪೂಜೆ ನೆರವೇರಿಸಿ ಶುಭ ಹಾರೈಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ.ವಿ.ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಕಡಬ ತಾ.ಪಂ.ಯೋಜನಾಧಿಕಾರಿ ಚೆನ್ನಪ್ಪ ಗೌಡ,ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಸುಲೋಚನಾ ,ಪುತ್ತೂರು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪಿ.ಡಿ.ಕೃಷ್ಣ ಕುಮಾರ್ ರೈ ದೇವಸ್ಯ, ಕಡಬ ತಾ.ಪಂ.ಮಾಜಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಸಂಯೋಜಕ ಶ್ರೀಕಾಂತ್ ಪೂಜಾರಿ ಬಿರಾವು,ಗ್ರಾ.ಪಂ.ಸದಸ್ಯರಾದ ಅಬ್ದುಲ್ ರಝಾಕ್,ಚೆನ್ನು,ಸತೀಶ್ ಅಂಗಡಿಮೂಲೆ,ರಫೀಕ್ ಎಂ.ಎ,ಯಶೋಧಾ,ಜಯಶ್ರೀ,ಭರತ್ ರೈ,ತಾರಾನಾಥ ಸುವರ್ಣ ಬೊಳಿಯಾಲ, ಬಾಬು ಎನ್, ಇಂದಿರಾ ಬೇರಿಕೆ,ಚಂದ್ರಾವತಿ ಸುಣ್ಣಾಜೆ,ತೀರ್ಥರಾಮ ಕೆಡೆಂಜಿ,ವಿನೋದಾ ರೈ ಚೆನ್ನಾವರ,ಚೇತನಾ ಪಾಲ್ತಾಡಿ,ಹರಿಕಲಾ ರೈ ಕುಂಜಾಡಿ, ಪುಣ್ಚಪ್ಪಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶೇಷಮ್ಮ ನೂಜಾಜೆ, ಸಹಾಯಕಿ ದೇವಕಿ, ಕುಮಾರಮಂಗಲ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಾನಕಿ, ಸಂಜೀವಿನಿ ಒಕ್ಕೂಟದ ಎಂಬಿಕೆ ಗೀತಾ,ವಸಂತಿ,ಲಲಿತಾ,ಚಂದ್ರಾವತಿ, , ಗ್ರಾ.ಪಂ.ಸಿಬಂದಿಗಳಾದ ಪ್ರಮೋದ್ ಕುಮಾರ್ ರೈ,ದಯಾನಂದ ಮಾಲೆತ್ತಾರು,ಶಾರದಾ ಎಂ.,ಜಯಶ್ರೀ ,ಯತೀಶ್ ಕುಮಾರ್ ಮೊದಲಾದವರಿದ್ದರು.

ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಅವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಎ.ಮನ್ಮಥ ಅವರು ವಂದಿಸಿದರು.

LEAVE A REPLY

Please enter your comment!
Please enter your name here