ಬನ್ನೂರು ಶಾಲೆ ಅಂಗನವಾಡಿಯಲ್ಲಿ ಗಾಂಧಿ ಜಯಂತಿ

0

ಪುತ್ತೂರು: ಬನ್ನೂರು ಶಾಲೆಯ ಅಂಗನವಾಡಿಯಲ್ಲಿ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ನಗರಸಭೆ ಸದಸ್ಯೆ ಗೌರಿ ಬನ್ನೂರು ಅವರು ಮಹಾತ್ಮ ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸ್ಪೂರ್ತಿ ಯುವ ಸಂಸ್ಥೆಯ ಸಂಚಾಲಕ ದಿನೇಶ್ ಸಾಲಿಯಾನ್, ಸ್ಪೂರ್ತಿ ಯುವಕ ಮಂಡಲದ ಅಧ್ಯಕ್ಷ ಸೂರ್ಯ ಕೋಟ್ಯಾನ್, ರೋಟರ್‍ಯಾಕ್ಟ್ ಕ್ಲಬ್‌ನ ಮಾಜಿ ಅಧ್ಯಕ್ಷ ನವೀನ್ ಕುಮಾರ್ ರೈ, ರೋಟರ್‍ಯಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್ ಎನ್ ಕಲ್ಲರ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಪುಟಾಣಿಗಳು, ಹಿರಿಯ ವಿದ್ಯಾರ್ಥಿಗಳು, ಬಾಲವಿಕಾ ಸಮಿತಿ ಸದಸ್ಯರು, ಸ್ತ್ರಿಶಕ್ತಿ ಗುಂಪಿನ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೋಹಿಣಿ ಸ್ವಾಗತಿಸಿ, ಸಹಾಯಕಿ ವನಿತ ಸಹಕರಿಸಿದರು.

LEAVE A REPLY

Please enter your comment!
Please enter your name here