ಸಿಎಂ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ

0

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿ ಶ್ರೀಮತಿ ನೂತನ ಅವರು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬದ ಓರ್ವ ಸದಸ್ಯರಿಗೆ ಉದ್ಯೋಗ ಭರವಸೆ ನೀಡಿ, ಇದೀಗ ತನ್ನನ್ನು ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೆ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ನೂತನಾ ಅವರು ಮುಖ್ಯಮಂತ್ರಿ ಮತ್ತು ಸಂಸದರಿಗೆ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here