ಉದನೆ: ಒಕ್ಕೂಟಗಳ ಪದಗ್ರಹಣ, ಸಾಧನ ಸಮಾವೇಶ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ವಲಯದ ಸಾಧನ ಸಮಾವೇಶ ಮತ್ತು ಶಿರಾಡಿ, ಕಳಪ್ಪಾರು, ಪುತ್ತಿಗೆ, ಅಡ್ಡಹೊಳೆ ಒಕ್ಕೂಟಗಳ ಪದಗ್ರಹಣ ಸಮಾರಂಭ ಉದನೆಯ ಸೈಂಟ್ ಆಂಟನೀಸ್ ಪ್ರೌಢಶಾಲೆ ಆವರಣದಲ್ಲಿ ಅ.7ರಂದು ನಡೆಯಿತು.

ಉದನೆ ಸೈಂಟ್ ಆ್ಯಂಟನೀಸ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ. ಹನಿಜೇಕಬ್‌ರವರು ಉದ್ಘಾಟಿಸಿ ಶುಭಹಾರೈಸಿದರು. ಪುತ್ತೂರು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್‌ರವರು ಪದಗ್ರಹಣ ನೆರವೇರಿಸಿ ಜವಾಬ್ದಾರಿ ಹಸ್ತಾಂತರ ಮಾಡಿದರು. ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಕೊಣಾಜೆ ಗ್ರಾ.ಪಂ.ಅಧ್ಯಕ್ಷ ಶಿವಪ್ಪ ಗೌಡ, ಉದನೆಯ ಸೈಂಟ್ ಆ್ಯಂಟನೀಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಗೌಡ, ಉದನೆಯ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ದಿವಾಕರ ಎಸ್.ಎ., ಶಿರಾಡಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸನ್ನಿ ಅಗಸ್ಟೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್ ಸ್ವಾಗತಿಸಿ, ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಮತ್ತು ಸುಂದರ ಗೌಡ ಬಳಕ್ಕಳ ಕಾರ್ಯಕ್ರಮ ನಿರೂಪಿಸಿದರು. ನೆಲ್ಯಾಡಿ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here