ಅ.9: ಪುತ್ತೂರಿನಲ್ಲಿ ಬೃಹತ್ ಮೀಲಾದ್ ಸಮಾವೇಶ – ಬುರ್ದಾ ಮಜ್ಲಿಸ್, ಕಾಲ್ನಡಿಗೆ ಜಾಥಾ

0

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಹಾಗೂ ಈದ್ ಮೀಲಾದ್ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ 30ನೇ ವರ್ಷದ ಬೃಹತ್ ಮೀಲಾದ್ ಸಮಾವೇಶ, ಬುರ್ದಾ ಮಜ್ಲಿಸ್ ಹಾಗೂ ಕಾಲ್ನಡಿಗೆ ಜಾಥಾ ಅ.9ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಪುತ್ತೂರು ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ದುವಾಶೀರ್ವಚನ ನೀಡಲಿದ್ದು ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ ಅಬ್ದುಲ್ ರಝಾಕ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ವಳಚ್ಚಿಲ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಬ್ದುಲ್ ಖಾದರ್ ದಾರಿಮಿ ಉದ್ಘಾಟಿಸಲಿದ್ದು ಮಿತ್ತೂರು ಕೆಜಿಎನ್ ದಅವಾ ಕಾಲೇಜಿನ ಪ್ರಾಂಶುಪಾಲ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಪ್ರಭಾಷಣ ಮಾಡಲಿದ್ದಾರೆ.

ಸಂಜೆ ಗಂಟೆ 4-30ಕ್ಕೆ ದರ್ಬೆ ಸರ್ಕಲ್ ಬಳಿಯಿಂದ ಕಾಲ್ನಡಿಗೆ ಜಾಥಾ ನಡೆಯಲಿದ್ದು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಅಧ್ಯಕ್ಷ ಖಾಸಿಂ ಹಾಜಿ ಮಿತ್ತೂರು ಹಾಗೂ ಹಸನ್ ಹಾಜಿ ಸಿಟಿ ಬಜಾರ್ ಜಾಥಾಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಹಲವು ಉಲಮಾ, ಉಮರಾ ನೇತಾರರು, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಹಾಗೂ ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here