ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅನಘ ಕೆ.ಎ.ಗೆ 4 ಚಿನ್ನದ ಪದಕದೊಂದಿಗೆ ವೈಯುಕ್ತಿಕ ಚಾಂಪಿಯನ್ ಶಿಪ್

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅ.7 ಮತ್ತು 8ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರು ತೆಂಕಿಲದ ಅನಘ ಕೆ.ಎ.ರವರು ನಾಲ್ಕು ಚಿನ್ನದ ಪದಕ ಪಡೆದಿದ್ದಾರೆ. ಅಲ್ಲದೆ, ವೈಯುಕ್ತಿಕ ಚಾಂಪಿಯನ್ ಪ್ರಶಸ್ತಿ ಗಳಿಸಿದ್ದಾರೆ.


100 ಮೀಟರ್ ಹರ್ಡಲ್ಸ್, 400 ಮೀಟರ್ ಓಟ, 400 ಮೀಟರ್ ಹರ್ಡಲ್ಸ್ ಮತ್ತು 4*100 ಮೀಟರ್ ರಿಲೇಯಲ್ಲಿ‌ ಪ್ರಥಮ ಸ್ಥಾನ ಪಡೆದು ನಾಲ್ಕು ಚಿನ್ನದ ಪದಕ ಗಳಿಸಿದ ಅನಘ ಕೆ.ಎ.ರವರು ವೈಯುಕ್ತಿಕ ಚಾಂಪಿಯನ್ ಆಗಿದ್ದಾರೆ. ಅಲ್ಲದೆ, ಬಳ್ಳಾರಿಯಲ್ಲಿ ಅ.11ರಿಂದ 14ರವರೆಗೆ ನಡೆಯಲಿರುವ ರಾಜ್ಯ ಮತ್ತು ಝೋನ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಪಡೆದಿದ್ದಾರೆ.
ತೆಂಕಿಲ ನಿವಾಸಿಗಳಾದ ಅನಿಲ್ ಗೌಡ ಮತ್ತು ಕವಿತಾ ದಂಪತಿಯ ಪುತ್ರಿಯಾಗಿರುವ ಅನಘ ಕೆ.ಎ.ರವರು ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಮಂಗಳೂರು ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾರೆ.
ಅನಘರವರು ಮಂಗಳೂರಿನ ದಿನೇಶ್ ಕುಂದರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here