ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ಹಾಗೂ ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಸಹಯೋಗದಲ್ಲಿ 24 ನೇ ಉಚಿತ ದಂತ ಚಿಕಿತ್ಸಾ ಶಿಬಿರ ಅ.9 ರಂದು ಇಲ್ಲಿನ ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಿತು.

ಶಿಬಿರವನ್ನು ದೀಪಬೆಳಗಿಸಿ ಉದ್ಘಾಟಿಸಿದ ಸಮಿತಿ ಸದಸ್ಯರು, ಕೆ.ವಿ.ಜಿ ದಂತ ಮಹಾವಿದ್ಯಾಲಯದ ಎಸೋಸಿಯೇಟ್ ಪ್ರೊಪೇಸರ್ ಡಾ.ಶಿವಾನಂದ ಮಾತನಾಡಿ, ಶಿಬಿರದಲ್ಲಿ ಹಲ್ಲುಗಳ ಸಮಸ್ಯೆಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಿ ಹಲ್ಲು ಕೀಳುವುದು, ಫಿಲ್ಲಿಂಗ್, ಜೋಡಣೆಗಳನ್ನು ನಡೆಸಲಾಗುವುದು. ಸಣ್ಣ ಪುಟ್ಟ ಚಿಕಿತ್ಸೆಗಳನ್ನು ಇಲ್ಲಿ ನಡೆಸಿ ಹೆಚ್ಚಿನ ಚಿಕಿತ್ಸೆಗಳನ್ನು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ನಡೆಸಲಾಗುವುದು. ಚಿಕಿತ್ಸೆಗೆ ತೆರಲುವವರಿಗೆ ಬಸ್ ಸೌಲಭ್ಯವನ್ನು ಒದಗಿಸಲಾಗುವುದು ಎಂದರು.

ಸಾಯಿಶ್ವರಿ ಮತ್ತು ಜೀವಿತಾ ಪ್ರಾರ್ಥಿಸಿದರು. ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಸತ್ಯ ಸುಂದರ ರಾವ್ ಸ್ವಾಗತಿಸಿದರು. ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ರಘುನಾಥ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here