ಬೈಕ್, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪರಾರಿಯಾಗುತ್ತಿದ್ದ ಕಾರಿಗೆ ಸಾರ್ವಜನಿಕರಿಂದ ತಡೆ- ಬೈಕ್ ಸವಾರನಿಗೆ ಗಾಯ

0

ಪುತ್ತೂರು: ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪರಾರಿಯಾಗುತ್ತಿದ್ದ ಕಾರನ್ನು ಸಾರ್ವಜನಿಕರು ಅಡ್ಡಗಟ್ಟಿ ನಿಲ್ಲಿಸಿದ ಘಟನೆ ಪುತ್ತೂರು ಮುಖ್ಯರಸ್ತೆಯ ಅರುಣಾ ಚಿತ್ರಮಂದಿರದ ಬಳಿ ಅ.೯ರಂದು ರಾತ್ರಿ 9.15ರ ವೇಳೆಗೆ ನಡೆದಿದೆ. ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ.

ಸುದ್ದಿ ಬಿಡುಗಡೆ ಕಚೇರಿ ಸಿಬ್ಬಂದಿ, ಈಶ್ವರಮಂಗಲ ನಿವಾಸಿ ಆದಿತ್ಯ ಎಡಪಡಿತ್ತಾಯರವರು ಕಚೇರಿಯಿಂದ ತನ್ನ ಬೈಕ್‌ನಲ್ಲಿ ಮುಖ್ಯರಸ್ತೆಯಾಗಿ ಮನೆಗೆ ಹೋಗುತ್ತಿದ್ದ ವೇಳೆ ಅರುಣಾಚಿತ್ರಮಂದಿರದ ಬಳಿ ವಿರುದ್ಧ ದಿಕ್ಕಿನಿಂದ ಧೀರಜ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಾರು ಅವರ ನಿಯಂತ್ರಣ ತಪ್ಪಿ ರಸ್ತೆಯ ರಾಂಗ್ ಸೈಡ್‌ಗೆ ಬಂದು ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪಲ್ಟಿಯಾಗಿದ್ದರೂ ಕಾರನ್ನು ಅದರ ಚಾಲಕ ನಿಲ್ಲಿಸದೆ ತರಾತುರಿಯಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿಯಾಗಿ ಪರಾರಿಯಾಗಿತ್ತು. ಇದೇ ಸಂದರ್ಭದಲ್ಲಿ ಸಾರ್ವಜನಿಕರು ಕಾರನ್ನು ಹಿಂಬಾಲಿಸಿ ಪಾಂಗ್ಲಾಯಿಗೆ ಹೋಗುವ ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಘಟನೆಯಿಂದ ಬೈಕ್ ಸವಾರ ಆದಿತ್ಯ ಎಡಪಡಿತ್ತಾಯರವರ ಕಾಲು ಮತ್ತು ಕೈಗೆ ಗಾಯವಾಗಿದೆ. ಅಪಘಾತದಿಂದ ಬೈಕ್, ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಘಟನೆಗೆ ಸಂಬಂಽಸಿ ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here