ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾರದಾ ಪೂಜೆ

0

ಪುತ್ತೂರು : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶಾರದಾ ಪೂಜೆಯನ್ನು ಅ.10 ರಂದು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್‌ರವರು ದೇವಿಕವಚ ಸ್ತೋತ್ರ ಪಠಿಸುವ ಮೂಲಕ ಸರಸ್ವತಿ ದೇವಿಯ ಆರಾಧನೆ ನಡೆಸಿ ಶ್ರೀದೇವಿಯು ಎಲ್ಲರಿಗೂ ಸನ್ಮಂಗಳವನ್ನು ಉಂಟುಮಾಡುವಂತೆ ಹಾರೈಸಿದರು. ಶಾಲಾ ಮಕ್ಕಳಿಂದ ಭಜನೆ ಕಾರ್ಯಕ್ರಮ ಜರುಗಿತು. ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳಿಂದ ಸರಸ್ವತಿ ದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ಹಾಗೂ ಶಾಲಾ ಮುಖ್ಯಗುರು ಜಯಮಾಲಾ ವಿ.ಎನ್.ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here