ಚೆಸ್ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಆಶಿಕಾ ಎಂ. ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಜ್ಞಾನ ವಿಕಾಸ್ ವಿದ್ಯಾಸಂಘ ಬಿಡದಿ  ವತಿಯಿಂದ ರಾಮನಗರ ಬಿಡದಿ ಶ್ರೀ ಬಸವೇಶ್ವರ ಸ್ವಾಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ  ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಆಶಿಕಾ ಎಂ. ತೃತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಉಪ್ಪಿನಂಗಡಿ ಭಾರ್ಯದ ಮನೋಹರ್ ಹಾಗೂ ಸವಿತಾ ಎಂ. ದಂಪತಿಯ ಪುತ್ರಿ ಎಂದು ಪ್ರಾಂಶುಪಾಲ ಎಚ್‌.ಕೆ. ಪ್ರಕಾಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here