ನಿವೃತ್ತ ಮುಖ್ಯ ಶಿಕ್ಷಕ ಪಿ. ಜನಾರ್ದನ ಅವರ 75ನೇ ಜನ್ಮ ದಿನ-ಕಡಬ ಪಣೆಮಜಲಿನಲ್ಲಿ ಅ.12ರಂದು ಕುಟುಂಬ ಸಮ್ಮಿಲನ

0

ಕಡಬ: ನಿವೃತ್ತ ಮುಖ್ಯ ಶಿಕ್ಷಕ ಪಿ ಜನಾರ್ದನ ಅವರ 75ನೇ ಜನ್ಮ ದಿನದ ಪ್ರಯುಕ್ತ ಕಡಬ ಪಣೆಮಜಲು ಶ್ರೀ ಸಬ್ಬಮ್ಮ ದೇವಿ ಸನ್ನಿಧಿಯಲ್ಲಿ ಕೆಂಚಭಟ್ರೆ ಸುಬ್ರಹ್ಮಣ್ಯ ಬೈಪಾಡಿತ್ತಾಯ ಅವರ ಮಾರ್ಗದರ್ಶನದಲ್ಲಿ ಅ.12 ರಂದು ಸಗ್ರಹ ಧನ್ವಂತರಿ ಪೂಜೆ, ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಗಂಟೆ 9 ರಿಂದ ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ನಾಗದೇವರಿಗೆ ತಂಬಿಲ, ಶ್ರೀ ದೇವಿಗೆ ವಿಶೇಷ ಪೂಜೆ , ಮಧ್ಯಾಹ್ನ ಹೊಸ ಅಕ್ಕಿ ಊಟ (ಹೊಸ್ತಾರೋಹಣ) ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಬೆಳ್ತಂಗಡಿಯ ವಿಠಲ ಶೆಟ್ಟಿ ಲಾಯಿಲಾ ಅವರು ಶುಭಾಶಯ ನುಡಿಗಳನ್ನಾಡಲಿದ್ದು, ಸಮಾಜದ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here