ಸೇರ ಕೋಟಿಯಪ್ಪ ಪೂಜಾರಿಗೆ ಸಚಿವ ಅಂಗಾರ ಎಸ್.ರವರಿಂದ ಗೌರವ ಸನ್ಮಾನ

0

ಪುತ್ತೂರು : ಬೆಳ್ಳಾರೆ ಅಜಿಪಿಲ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ನಡೆದ 168ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಗುರುಪೂಜೆ ಪ್ರತಿಭಾ ಪುರಸ್ಕಾರ ಸನ್ಮಾನ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸೇರ ಕೋಟಿಯಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಬಂದರು ಮೀನುಗಾರಿಕಾ ಮತ್ತು ಒಳನಾಡು ಸಾರಿಗೆ ಸಚಿವರಾದ ಅಂಗಾರ ಎಸ್.ರವರು ಶಾಲು, ಹಾರ, ಸ್ಮರಣಿಕೆ, ಸನ್ಮಾನ ಪತ್ರ, ಫಲಪುಷ್ಪ ನೀಡಿ ಸನ್ಮಾನಿಸಿದರು. ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ದ.ಕ. ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವಪೂಜಾರಿ, ಮಂಗಳೂರು ಕುದ್ರೋಳಿ ಶ್ರೀ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸುಳ್ಯ, ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷ ಜನಾರ್ಧನ ಪೂಜಾರಿ ಅಲೆಕ್ಕಾಡಿ, ಸಂಘದ ಅಧ್ಯಕ್ಷ ಎನ್. ಎಸ್.ಡಿ. ವಿಠಲ್‌ದಾಸ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಸಾರಕೆರೆ ಯುವವಾಹಿನಿ ಅಧ್ಯಕ್ಷ ಅನಿಲ್ ಪೂಜಾರಿ ಕುತ್ಯಾಡಿ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಬಿರುವ ಕುಡ್ಲ ಸುಳ್ಯ ಘಟಕದ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here