ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ಯುವಕವೃಂದದ ದಶಮಾನೋತ್ಸವದ ಪ್ರಯುಕ್ತ ನಡೆಯಲಿರುವ ಮಹಾ ಚಂಡಿಕಾಯಾಗದ ಆಮಂತ್ರಣ ಪತ್ರ ಬಿಡುಗಡೆ

0

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಉಪ ಸಮಿತಿಗಳ ಸಹಯೋಗದೊಂದಿಗೆ ಶ್ರೀ ವಿಷ್ಣುಮೂರ್ತಿ ಯುವಕವೃಂದ ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ನ.9ರಂದು ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ, ವಿಷ್ಣುಮೂರ್ತಿ ದೇವರಿಗೆ ಲಕ್ಷ ತುಳಸೀ ಅರ್ಚನೆ ಮತ್ತು ಪುಂಡಿ ಪಣವು ಸಮರ್ಪಣೆ ಕಾರ್ಯಕ್ರಮವು ನಡೆಯಲಿದ್ದು ‌ಅದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಕ್ಷೇತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಇದರ ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಉಜಿರೆಮಾರ್, ವಿಟ್ಲಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ನಾಯಕ್ ನಾಟೆಕಲ್, ವೇಣುಗೋಪಾಲ್ ಮರುವಾಳ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಇದರ ಆಡಳಿತ ಸಮಿತಿ ಕಾರ್ಯದರ್ಶಿ ಗೋವಿಂದ್ ರಾಜ್, ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯ ಚಿದಾನಂದ ಪೆಲತ್ತಿಂಜ,ಪ್ರಶಾಂತ್ ಶೆಟ್ಟಿ ಬರೆ, ಶ್ರೀ ವಿಷ್ಣುಮೂರ್ತಿ ಯುವಕವೃಂದ ವಿಷ್ಣುನಗರ ಇದರ ಅಧ್ಯಕ್ಷ ಯತೀಶ್ ಹಡೀಲು ಹಾಗೂ ಶ್ರೀ ವಿಷ್ಣುಮೂರ್ತಿ ಯುವಕವೃಂದ ವಿಷ್ಣುನಗರ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here