ಕಾಣಿಯೂರು: ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಸಂಜೀವ ಮಠಂದೂರುರವರಿಗೆ ಮನವಿ

0

ಕಾಣಿಯೂರು: ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ ಅವರ ನೇತೃತ್ವದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಭೇಟಿ ಮಾಡಿ ಚಾರ್ವಾಕ ವಿದ್ಯುತ್ ಸಬ್ ಸ್ಟೇಷನ್, ದೋಳ್ಪಾಡಿ ಶಾಲೆಗೆ ಮೂಲಭೂತ ಸೌಕರ್ಯ, ಪುತ್ತೂರು -ನಾಣಿಲ -ಅಭಿಕಾರ – ಎಣ್ಮೂರು ವರೆಗೆ ಕೆ.ಎಸ್.ಆರ್. ಟಿ ಸಿ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ.

ಈ ಬಗ್ಗೆ ಶಾಸಕರು ಸ್ಪಂದನೆ ವ್ಯಕ್ತಪಡಿಸಿ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ ದರ್ಖಾಸು, ಸದಸ್ಯರಾದ ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ, ತೇಜ ಕುಮಾರಿ ಉದ್ಲಡ್ಡ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ವರ ಅನಿಲ, ದೋಳ್ಪಾಡಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಉಷಾ, ಲಕ್ಷ್ಮಣ ಗೌಡ ಮುಗರಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here