ಪುತ್ತೂರು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಪುತ್ತೂರು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ ಅ.11ರಂದು ಮುಕ್ರಂಪಾಡಿಯಲ್ಲಿರುವ ಸಂಘದ ಕಛೇರಿಯಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಮೋಹನ್ ಕುಮಾರ್ 2021-22ನೇ ಸಾಲಿನ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ ಸಭೆಯ ಅನುಮೋದನೆ ಪಡೆಯಲಾಯಿತು. ಸಂಘದ ಅದ್ಯಕ್ಷ ಶಿವಶಂಕರ ಭಟ್ ಸ್ವಾಗತಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘಕ್ಕೆ ಸಂಬಂಧಿಸಿದ ಜಾಗದ ದಾಖಲೆ ಮತ್ತು ಕೈಗಾರಿಕಾ ವಲಯದ ಕೆಲಸಕಾರ್ಯಗಳು ಅಂತಿಮ ಹಂತದಲ್ಲಿದೆ ಎಂದು ಹೇಳಿದರು. ಅಧ್ಯಕ್ಷರ ಅನುಮತಿ ಮೇರೆಗೆ ಕೈಗಾರಿಕಾ ಸಂಘದ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. 2022-23ನೇ ಸಾಲಿಗೆ ಕೈಗಾರಿಕಾ ಸಂಘದ ಸಮಿತಿಯನ್ನು ಮುಂದುವರೆಸಲು ಸಭೆಯಲ್ಲಿ ಒಪ್ಪಿಗೆ ಪಡೆಯಲಾಯಿತು. ಖಜಾಂಜಿ ಗಣೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಭಾಗವಹಿಸಿದ್ದರು. ಅನಿತಾ ಉದಯಕುಮಾರ್ ಪ್ರಾರ್ಥಿಸಿ ಮೋಹನ್ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here