ವಿವೇಕಾನಂದ ಪದವಿ ಪೂರ್ವಕಾಲೇಜಿಗೆ ಸ್ವಾಮಿ ಮಂಗಳನಾಥಾನಂದಜಿ ಭೇಟಿ

0

ಪುತ್ತೂರು, ಅ13 :ಬೆಂಗಳೂರಿನ ಶಿವನಹಳ್ಳಿಯ ರಾಮಕೃಷ್ಣ ಮಠದ ಸ್ವಾಮಿ ಮಂಗಳನಾಥಾನಂದಜಿ ಪುತ್ತೂರಿನ ವಿವೇಕಾನಂದ ಪದವಿ ಪೂರ್ವಕಾಲೇಜಿಗೆ ಭೇಟಿ ನೀಡಿದರು .

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸ್ವಾಮೀಜಿಯವರು ಕಾಲೇಜು ಆವರಣವನ್ನು ಸಂದರ್ಶಿಸಿ ಕಾಲೇಜು ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ವಿವೇಕಾನಂದ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಕಾಲೇಜಿನ ಹಿನ್ನಲೆ, ಸೌಲಭ್ಯಗಳು ಹಾಗೂ ವಿವಿಧಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೂಜ್ಯರು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ವಾಮೀಜಿ ನಂತರ ವಿವೇಕಾನಂದ ಪತ್ರಿಕೋದ್ಯಮ ವಿಭಾಗದ ವಿಕಸನ ಮಲ್ಟಿಮೀಡಿಯಾ ಸ್ಟುಡಿಯೋ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಪಾಂಚಜನ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ – ಪ್ರಾಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here