ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆ.ಮಾ. ವಿದ್ಯಾರ್ಥಿಗಳು ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಹಾಗೂ ಬಳ್ಳಾರಿ ಬಾಲಭಾರತಿ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬಳ್ಳಾರಿ ಬಾಲ ಭಾರತಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ಅ.12 ಮತ್ತು 13ರಂದು ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳನ್ನು ಒಳಗೊಂಡ ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

14ರ ವಯೋಮಾನದ ಬಾಲ ವರ್ಗದ ಬಾಲಕಿಯರ ವಿಭಾಗದಲ್ಲಿ ಶ್ರೀವರ್ಣಾ (ಪಾಲೆತ್ತಡಿ ಧರ್ಣಪ್ಪ ಗೌಡ ಮಮತಾ ಪಿ. ದಂಪತಿ ಪುತ್ರಿ) ಎತ್ತರಜಿಗಿತ (ಪ್ರಥಮ), ಉದ್ದಜಿಗಿತ (ಪ್ರಥಮ), 80 ಮೀಟರ್ ಹರ್ಡಲ್ಸ್ (ಪ್ರಥಮ), 4*100 ಮೀಟರ್‌ರಿಲೇ (ಪ್ರಥಮ), ಕೃತಿ,ಕೆ (ಬನ್ನೂರು ಕೊರಗಪ್ಪ ಗೌಡ, ವನಿತಾ ಎ. ದಂಪತಿ ಪುತ್ರಿ) 600 ಮೀಟರ್ (ಪ್ರಥಮ), 400 ಮೀಟರ್ (ದ್ವಿತೀಯ), 4*100 ಮೀಟರ್ ರಿಲೇ (ಪ್ರಥಮ), ಡಿಂಪಲ್ ಶೆಟ್ಟಿ 200 ಮೀಟರ್(ತೃತೀಯ), 100 ಮೀಟರ್ (ದ್ವಿತೀಯ), ಉದ್ದ ಜಿಗಿತ(ತೃತೀಯ), 4*100 ಮೀಟರ್ ರಿಲೇ (ಪ್ರಥಮ), ಅಮೃತಾ ಬಿ.ಎ (ಬನ್ನೂರು ಪಟ್ಟೆ ಅಮರನಾಥ್, ಲತಾಕುಮಾರಿ ದಂಪತಿ ಪುತ್ರಿ) 600 ಮೀಟರ್(ತೃತೀಯ), 4*100 ಮೀಟರ್ ರಿಲೇ (ಪ್ರಥಮ), ಬಹುಮಾನ ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಕೃಪಾಲ್ ಪಿ.ಕೆ (ಕೆಮ್ಮಾಯಿಯ ಪ್ರಕಾಶ್ ಬಿ., ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್(ದ್ವಿತೀಯ), 400 ಮೀಟರ್(ತೃತೀಯ) ಅಭಿಶ್ಯಾಮ (ಪರ್ಲಡ್ಕ ಮುರಳೀಧರ್, ರಾಜೇಶ್ವರಿ ದಂಪತಿ ಪುತ್ರ) ಎತ್ತರ ಜಿಗಿತ(ದ್ವಿತೀಯ) ಬಹುಮಾನ ಗಳಿಸಿರುತ್ತಾರೆ.

17ರ ವಯೋಮಾನದ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಅನ್ನಿಕಾ ಕೆ.(ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ ಎಂ, ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್ (ಪ್ರಥಮ), 1500 ಮೀಟರ್(ತೃತೀಯ), ಬಿ. ಲಿಖಿತಾರೈ (ಚಣಿಲ ಬಿ. ಜಗನ್ನಾಥ್ ರೈ, ಗೀತಾ ಜೆ. ರೈ ದಂಪತಿ ಪುತ್ರಿ) 4*100 ಮೀಟರ್ ರಿಲೇ (ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), 400 ಮೀಟರ್ (ಪ್ರಥಮ), ವಂಶಿ ಬಿ.ಕೆ (ಬಪ್ಪಳಿಗೆ ಕಮಲಾಕ್ಷ, ಜಯಲತಾ ದಂಪತಿ ಪುತ್ರಿ) 200 ಮೀಟರ್(ತೃತೀಯ), 100 ಮೀಟರ್ ಹರ್ಡಲ್ಸ್(ದ್ವಿತೀಯ), 4*100 ಮೀಟರ್ ರಿಲೇ(ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), ರಿದ್ಧಿ ಸಿ.ಶೆಟ್ಟಿ (ಪುಂಡಿಕಾಯಿ ಚಿದಾನಂದ ಶೆಟ್ಟಿ, ಸತ್ಯವತಿ ಸಿ. ಶೆಟ್ಟಿ ದಂಪತಿ ಪುತ್ರಿ) 4*100 ಮೀಟರ್ ರಿಲೇ(ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), ಸಾನ್ವಿ ಎಸ್. ಪಿ. (ಪಳಂಬೆ ಯೋಧ ಡಿ.ಸುಂದರ ಪೂಜಾರಿ, ಶಿಕ್ಷಕಿ ಭವಿತಾ ಕೆ. ದಂಪತಿ ಪುತ್ರಿ) 100 ಮೀಟರ್(ತೃತೀಯ), 4*100 ಮೀಟರ್ ರಿಲೇ(ದ್ವಿತೀಯ), 4*400 ಮೀಟರ್ ರಿಲೇ (ಪ್ರಥಮ), ಸಮೃದ್ಧಿ ಜೆ.ಶೆಟ್ಟಿ (ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಹರಿಣಾಕ್ಷಿ ಜೆ. ಶೆಟ್ಟಿ ದಂಪತಿ ಪುತ್ರಿ) ಎತ್ತರ ಜಿಗಿತ(ತೃತೀಯ), ಉದ್ದ ಜಿಗಿತ (ದ್ವಿತೀಯ), ಶ್ರದ್ಧಾ ಲಕ್ಷಿ÷್ಮ (ತಾರಿಗುಡ್ಡೆ ರವಿಶಂಕರ್, ಅನುಪಮಾ ದಂಪತಿ ಪುತ್ರಿ) ಟ್ರಿಪಲ್‌ಜಂಪ್ (ತೃತೀಯ), ಬಹುಮಾನ ಗಳಿಸಿರುತ್ತಾರೆ. ಬಾಲಕರ ವಿಭಾಗದಲ್ಲಿ ಚರಣ್‌ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾದಂಪತಿ ಪುತ್ರ) 3000 ಮೀಟರ್(ದ್ವಿತೀಯ), 5 ಕಿಲೋಮೀಟರ್ ನಡಿಗೆ (ಪ್ರಥಮ), ಸಚಿತ್ ಪಿ.ಕೆ (ಕೆಮ್ಮಾಯಿಯ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 400 ಮೀಟರ್(ತೃತೀಯ) ಪ್ರಥಮ್ ಎಂ.ಪಿ (ಪಡ್ನೂರು ಪದ್ಮಪ್ಪ ಪೂಜಾರಿ, ಮಾಲತಿ ಬಿ. ದಂಪತಿ ಪುತ್ರ) ಚಕ್ರಎಸೆತ (ದ್ವಿತೀಯ) ಬಹುಮಾನ ಗಳಿಸಿರುತ್ತಾರೆ. ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥರಾದ ಭಾಸ್ಕರಗೌಡ ಮುಂಗ್ಲಿಮನೆಯವರ ಮಾರ್ಗದರ್ಶನದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಆಶಾಲತಾ, ನಮಿತಾ, ದೀಪಕ್, ರಶ್ಮಿ, ಪವನ್‌ಕುಮಾರ್ ಇವರ ಸಹಕಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಣಿಯಾರು ಮತ್ತು ವಾಣಿಶ್ರೀರವರು ತರಬೇತು ನೀಡಿದ್ದಾರೆ. ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here