ಪೇರಲ್ತಡ್ಕ: ಜನ ಸೇವಾ ಕೇಂದ್ರ ಉದ್ಘಾಟನೆ

0

 ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು  ಬೆಟ್ಟಂಪಾಡಿ ವಲಯದ ಪೇರಲ್ತಡ್ಕ ಕಾರ್ಯಕ್ಷೇತ್ರದಲ್ಲಿ ಜನ ಸೇವಾ ಕೇಂದ್ರವನ್ನು ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅ.13 ರಂದು ಪೇರಲ್ತಡ್ಕ ಕಚೇರಿಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
   ಯೋಜನೆಯ ತಾಲೂಕು ಯೋಜನಾಧಿಕಾರಿ ಆನಂದ ಜನ ಸೇವಾ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.    ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿ ಬಂದು ಸ್ವಸಹಾಯ ಸಂಘದ ಬೆಟ್ಟಂಪಾಡಿ ವಲಯಾಧ್ಯಕ್ಷ ಬಾಲಕೃಷ್ಣ ಎನ್ , ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ  ರವಿ ಕಟೀಲ್ತಡ್ಕ, ಧೂಮಡ್ಕ ಒಕ್ಕೂಟದ ಅಧ್ಯಕ್ಷ ಕೃಷ್ಣ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
     ಒಕ್ಕೂಟದ ಕಾರ್ಯದರ್ಶಿ ಉಮೇಶ್ ಸ್ವಾಗತಿಸಿ ನಾರಾಯಣ ಪಾಟಾಳಿ ದೆಯ್ಯರಡ್ಕ ವಂದಿಸಿದರು. ವಲಯ ಮೆಲ್ವೀಚಾರಕ ಶಿವಪ್ಪ.ಎನ್ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here