ಅ.26: ಕ್ರೀಡಾ ಇಲಾಖೆಯಿಂದ ಅಥ್ಲೆಟಿಕ್ಸ್ ತರಬೇತಿಗೆ ಆಯ್ಕೆ ಪ್ರಕ್ರಿಯೆ

0

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಇದರ ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ವೈಜ್ಞಾನಿಕ ತರಬೇತಿ ಪಡೆಯಲು ಇಚ್ಚಿಸುವ ಪ್ರತಿಭಾವಂತ 30 ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಅ.26 ರಂದು ಬೆಳಗ್ಗೆ 10 ಗಂಟೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

12 ರಿಂದ 18 ವರ್ಷದೊಳಗಿನ ಬಾಲಕ ಬಾಲಕಿಯರು ಜನ್ಮ ದೃಢೀಕರಣ ಪತ್ರ(ಶಾಲೆ ಕಾಲೇಜು ಮುಖ್ಯಸ್ಥರಿಂದ ದೃಢೀಕೃತ) ಹಾಗೂ ಕ್ರೀಡಾ ಸಾಧನೆಯ ಪ್ರಮಾಣ ಪಾತ್ರದೊಂದಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಕ್ರೀಡಾ ಸಮವಸ್ತ್ರ ಕಡ್ಡಾಯವಾಗಿರತ್ತದೆ, ಟ್ರಾಕ್ ಮತ್ತು ಫೀಲ್ಡ್ ವಿಭಾಗಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ (0824-2451264)ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾ ಮೇಲ್ವಿಚಾರಕರಾದ ಶ್ರೀಕಾಂತ್ ಬಿರಾವು ಪ್ರಕಟಣೆ ನೀಡಿದ್ದಾರೆ.

LEAVE A REPLY

Please enter your comment!
Please enter your name here