ಕರ್ನಾಟಕದಲ್ಲಿ ಭಾರತ್-ಜೋಡೋ ಯಾತ್ರೆಯ ಸಮಾರೋಪ: ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೆಸ್ ಮುಖಂಡರು ಭಾಗಿ

0

ಪುತ್ತೂರು : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಯ ದಿನ ನಡೆದ ಅಂಗವಾಗಿ ಬಳ್ಳಾರಿಯಲ್ಲಿ ಆಯೋಜಿಸಿದ ಸಮಾರೋಪ ಸಮಾರಂಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಹಲವು ನಾಯಕರು ಭಾಗವಹಿಸಿದ್ದರು.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ರಾಜಾರಾಮ್ ಕೆ.ಬಿ., ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅದ್ಯಕ್ಷ ಮಹಾಲಿಂಗ ನಾಯ್ಕ್, ಸಾಮಾಜಿಕ ಜಾಲತಾಣ ಅದ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಹಿಂದುಳಿದ ವರ್ಗ ಘಟಕದ ಅದ್ಯಕ್ಷ ಹರೀಶ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸಾಯಿರಾ ಝುಬೈರ್ , ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಬೀಬ್ ಕಣ್ಣೂರು, ಯುವ ಕಾಂಗ್ರೆಸ್ ಉಪಾದ್ಯಕ್ಷರಾದ ಬಾಲಕೃಷ್ಣ ಗೌಡ, ಪಂಚಾಯತ್ ರಾಜ್ ಪ್ರಮುಖರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಅನಸ್ ಉಪ್ಪಿನಂಗಡಿ ಮುಂತಾದವರು ಭಾಗಹಿಸಿದ್ದರು.

LEAVE A REPLY

Please enter your comment!
Please enter your name here