ಕುವೆತ್ತಿಲ ಕಾರು ಬೈಕ್ ಡಿಕ್ಕಿ – ಸವಾರನಿಗೆ ಗಾಯ

0

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಅ.15ರ ತಡ ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕುವೆತ್ತಿಲ ಸಮೀಪ ನಡೆದಿದ್ದು, ಅಪಘಾತದಿಂದ ಬೈಕ್ ಸವಾರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಮತ್ತು ವಿರುದ್ಧ ಮಂಗಳೂರು ಕಡೆ ಹೋಗುತ್ತಿದ್ದ ಕಾರು ನಡುವೆ ಕುವೆತ್ತಿಲ ಸಮೀಪ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಜಹೀದ್ ಎಂಬವರು ಗಾಯಗೊಂಡಿದ್ದಾರೆ. ಗಾಯಳು ಪುತ್ತೂರು ಅಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here