![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೋರ್ವಳು ಉಪ್ಪಿನಂಗಡಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ನಾಪತ್ತೆಯಾಗಿದ್ದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಬಾಲಕಿಯ ಹೆತ್ತವರು ದೂರು ನೀಡಿದ್ದು ಕಿಡ್ನಾಪ್ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಎಸ್.ಐ.ಸುತೇಶ್ರವರು ಬಾಲಕಿಯನ್ನು ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿಯನ್ನು ಠಾಣೆಗೆ ಕರೆದುಕೊಂಡು ಬಂದ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ರಿಮೈಂಡ್ ಹೋಂಗೆ ದಾಖಲುಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.