ಕಬಕ:15 ದಿನದಲ್ಲಿ ಕಾಮಗಾರಿ ಆರಂಭ ; ಶಾಸಕರ ಭರವಸೆ-ಪ್ರತಿಭಟನೆ ಮುಂದೂಡಿಕೆ

0

ಪುತ್ತೂರು: ಕಬಕ ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಶಾಸಕರ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ.

ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ಅ.18ರಂದು ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು.ಆದರೆ, 13 ಕೋಟಿ ರೂ.ವೆಚ್ಚದಲ್ಲಿ ರಸ್ತೆಯನ್ನು 5.5 ಮೀಟರ್‌ನಿಂದ 7.5 ಮೀಟರ್ ಅಗಲೀಕರಣಗೊಳಿಸಿ ಡಾಮರೀಕರಣಗೊಳಿಸುವ ಕಾಮಗಾರಿಯನ್ನು 15 ದಿನದಲ್ಲಿ ಪ್ರಾರಂಭಗೊಳಿಸುವುದಾಗಿ ಶಾಸಕರು ತಿಳಿಸಿರುವ ಪ್ರಕಾರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕಾವು ಹೇಮನಾಥ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಂದು ತಿಂಗಳೊಳಗೆ ಕಾಮಗಾರಿ ಪ್ರಾರಂಭಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here