ಕಾವು ತುಡರ್ ಭಜನಾ ಸಂಘದ 7ನೇ ವಾರ್ಷಿಕೋತ್ಸವ-ಆಮಂತ್ರಣ ಪ್ರತಿ ಬಿಡುಗಡೆ

0

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ಅಧೀನದಲ್ಲಿರುವ ತುಡರ್ ಭಜನಾ ಸಂಘದ ೭ನೇ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪ್ರತಿಯನ್ನು ಅ.17 ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಕಾವು ದೇವಸ್ಥಾನದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯರವರು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು, ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಕಾವು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ ನನ್ಯ, ಭಜನಾ ಸಂಘದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ, ಕಾರ್ಯದರ್ಶಿ ಚಂದ್ರಶೇಖರ ಬಲ್ಯಾಯ, ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ, ಸುನೀಲ್ ನಿಧಿಮುಂಡ, ನವೀನ ನನ್ಯಪಟ್ಟಾಜೆ, ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಜತೆ ಕಾರ್ಯದರ್ಶಿ ಹರ್ಷ ಎ.ಆರ್, ಕೋಶಾಧಿಕಾರಿ ಹರೀಶ್ ಕೆರೆಮೂಲೆ, ಸದಸ್ಯರಾದ ನಿರಂಜನ ರಾವ್ ಕಮಲಡ್ಕ, ಭವಿತ್ ರೈ, ಶ್ರೀಕಾಂತ್ ಗೌಡ, ಸತೀಶ ಮದ್ಲ, ಸಂದೇಶ್ ಚಾಕೋಟೆ, ಹಿತೈಷಿಗಳಾದ ಕುಶಾಲಪ್ಪ ಗೌಡ ಬದಿಯಡ್ಕ, ಯೋಗೀಶ್ ಗೌಡ ಕಾವುರವರು ಉಪಸ್ಥಿತರಿದ್ದರು.

ಅ.29ರಂದು ಭಜನಾ ವಾರ್ಷಿಕೋತ್ಸವ:
ತುಡರ್ ಭಜನಾ ಸಂಘದ 7ನೇ ವರ್ಷದ ವಾರ್ಷಿಕೋತ್ಸವವು ಅ.29ರಂದು ಸಂಜೆ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 5ರಿಂದ ಭಜನಾ ಕಾರ್ಯಕ್ರಮ ಆರಂಭಗೊಂಡು ಬಳಿಕ ಸುಜ್ಞಾನ ಮಕ್ಕಳ ಭಜನಾ ಸಂಘದ ಮಕ್ಕಳಿಂದ ಕುಣಿತ ಭಜನೆ ನಡೆಯಲಿದೆ. ಸಂಜೆ ಗಂಟೆ 7 ರಿಂದ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ಧಾರ್ಮಿಕ ಭಾಷಣ ಮಾಡಲಿದ್ದಾರೆ, ದಾಸ ಸಾಹಿತ್ಯ ಸಂಕೀರ್ತನಕಾರ ಹಾಗೂ ಪ್ರಚಾರಕರೂ ಆಗಿರುವ ರಾಮಕೃಷ್ಣ ಕಾಟುಕುಕ್ಕೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ, ಕಾವು ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಂಸ್ಥಾಪಕ ಸುಂದರ ಪೂಜಾರಿ ಕೆರೆಮಾರುರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭೆಯ ಬಳಿಕ ಭೋಜನ ನಡೆಯಲಿದೆ.

LEAVE A REPLY

Please enter your comment!
Please enter your name here