ಕೆಮ್ಮಾರ ಸರಕಾರಿ ಶಾಲೆಯಲ್ಲಿ ಬಯಲು ರಂಗಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

0

ಕೆಮ್ಮಾರ: ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಬಯಲು ರಂಗ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜರಗಿತು.

ಹಿರೇಬಂಡಾಡಿ ಗ್ರಾ.ಪಂ.ಸದಸ್ಯರಾದ ಹೇಮಂತ್, ವಾರಿಜಾಕ್ಷಿಯವರು ಶಿಲಾನ್ಯಾಸ ನೆರವೇರಿಸಿದರು. ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ., ಸದಸ್ಯರಾದ ಪದ್ಮನಾಭ ಶೆಟ್ಟಿ ಬಡಿಲ, ವಾಮನ ಬರಮೇಲು, ಸೆಲಿಕತ್, ಅಬ್ಬಾಸ್ ಬಡಿಲ, ಅಸ್ಮಾ, ರಶೀದಾ, ಯೋಗಿತಾ, ಶಿಕ್ಷಕರಾದ ವೆಂಕಟ್ರಮಣ ಭಟ್, ಜುನೈದ್, ಸುಮನಾ, ಮೆಹನಾಝ್, ಶಹನಾಝ್ ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಂ., ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದಿಸಿದರು.

LEAVE A REPLY

Please enter your comment!
Please enter your name here