ಕಾಣಿಯೂರು ಗ್ರಾ.ಪಂ.ಸಭಾಭವನ ಕಟ್ಟಡ, ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ಆಮಂತ್ರಣ ಅನಾವರಣ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಅ 27ರಂದು ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣವನ್ನು ಕಾಣಿಯೂರು ಗ್ರಾ.ಪಂ.ನಲ್ಲಿ ಅ 18ರಂದು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್, ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಪ್ರವೀಣ್‌ಚಂದ್ರ ರೈ ಕುಮೇರು, ದೇವಿಪ್ರಸಾದ್ ದೋಳ್ಪಾಡಿ, ವಿಶ್ವನಾಥ ಕೊಪ್ಪ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಸುನಂದ ಅಬ್ಬಡ, ಕೀರ್ತಿಕುಮಾರಿ ಅಂಬುಲ, ಸುಲೋಚನಾ ಮಿಯೋಳ್ಪೆ, ಅಂಬಾಕ್ಷಿ ಕೂರೇಲು, ಗಂಗಮ್ಮ ಗುಜ್ಜರ್ಮೆ, ಮೀರಾ, ಸಿಬ್ಬಂದಿಗಳಾದ ತಿಮ್ಮಪ್ಪ ಗೌಡ ಬೀರುಕುಡಿಕೆ, ಚಿತ್ರಾ, ಕುಮಾರ್, ಕೀರ್ತಿಕುಮಾರ್, ಶಶಿಕಲಾ, ಸಂಜೀವಿನಿ ಒಕ್ಕೂಟದ ಕಾರ್ಯಕರ್ತೆ ಸುಮನಾ ಉಪಸ್ಥಿತರಿದ್ದರು.

ಕಾಣಿಯೂರು ಗ್ರಾ.ಪಂ.ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಅ 27ರಂದು ನಡೆಯಲಿದೆ. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರಾದ ಎಸ್ ಅಂಗಾರ, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಪುತ್ತೂರು ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ.

-ಗಣೇಶ್ ಉದನಡ್ಕ, ಉಪಾಧ್ಯಕ್ಷರು, ಗ್ರಾ.ಪಂ.ಕಾಣಿಯೂರು

LEAVE A REPLY

Please enter your comment!
Please enter your name here