ಅ.20: ರೋಟರಿ ಸ್ವರ್ಣಕ್ಕೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ರೋಟರಿ ಅಂತರ್ರಾಷ್ಟ್ರೀಯ ಜಿಲ್ಲೆ 3181, ವಲಯ 5 ರ ರೋಟರಿ ಕ್ಲಬ್ ಪುತ್ತೂರು ಸ್ವರ್ಣಕ್ಕೆ ರೋಟರಿ ಜಿಲ್ಲಾ 3181ರ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್‌ರವರು ಅ.20 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್‌ರವರನ್ನು ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಾಗತಿಸಲಿದ್ದು ಬಳಿಕ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ನಡೆಯಲಿದೆ. ಕ್ಲಬ್ ಸದಸ್ಯ ರೋಯ್‌ಸ್ಟನ್ ಡಾಯಸ್‌ರವರ ಮನೆಯಲ್ಲಿ ಬೆಳಗ್ಗಿನ ಲಘು ಉಪಹಾರ ಸೇವಿಸಿದ ಬಳಿಕ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್‌ರವರು ರೋಟರಿ ಸ್ವರ್ಣ ಕ್ಲಬ್ ವತಿಯಿಂದ ನಡೆಸಲ್ಪಡುವ ಸಮಾಜಮುಖಿ ಕಾರ್ಯಕ್ರಮಗಳಾದ ಪುತ್ತೂರು ಬ್ರಹ್ಮನಗರ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಹಾಗೂ ಕು|ಯಶೋಧ ಇವರ ಮನೆಗೆ ಭೇಟಿ ನೀಡಿ ಮನೆಗೆ ನೀಡಿದ ಅನುದಾನದ ವೀಕ್ಷಣೆ, ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಿರ್ಮಾಣಗೊಂಡ ನೂತನ ಸಾರ್ವಜನಿಕ ಬಸ್ ತಂಗುದಾಣದ ಉದ್ಘಾಟನೆ ಹಾಗೂ ಹಸ್ತಾಂತರ, ನರಿಮೊಗರು ಮತ್ತು ಮುಕ್ವೆ ಅಂಗನವಾಡಿಗಳ ಮಕ್ಕಳಿಗೆ ಚಪ್ಪಲಿ ವಿತರಣೆ, ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡಿಕೆ ತೋಟದ ವೀಕ್ಷಣೆ, ಪಡ್ನೂರು ಔಷಧಿ ವನಕ್ಕೆ ಭೇಟಿ, ಬೀರಮಲೆ ಪ್ರಜ್ಞಾ ಆಶ್ರಮಕ್ಕೆ ಭೇಟಿ ನೀಡಿ ಆಶ್ರಮವಾಸಿಗಳೊಂದಿಗೆ ಮಧ್ಯಾಹ್ನದ ಭೋಜನ ಹಾಗೂ ಸಹಾಯಧನ ವಿತರಣೆಗೈಯಲಿದ್ದು, ಅಪರಾಹ್ನ ಜಿಲ್ಲಾ ಗವರ್ನರ್‌ರಿಂದ ಕ್ಲಬ್ ಅಸೆಂಬ್ಲಿ ಜರಗಲಿದೆ ಎಂದು ರೋಟರಿ ಸ್ವರ್ಣದ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ, ಕಾರ್ಯದರ್ಶಿ ಸುರೇಶ್ ಪಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಜರಗುವ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್‌ರವರು ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ವಲಯ ಐದರ ಸಹಾಯಕ ಗವರ್ನರ್ ಎ.ಜಗಜೀವನ್‌ದಾಸ್ ರೈ, ವಲಯ ಸೇನಾನಿ ಸೆನೋರಿಟಾ ಆನಂದ್‌ರವರು ಉಪಸ್ಥಿತಲಿರುವರು.

LEAVE A REPLY

Please enter your comment!
Please enter your name here