ಅಕ್ಷಯ ಕಾಲೇಜಿನಲ್ಲಿ ಎನ್.ಎಸ್. ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಅಕ್ಷಯ ಕಾಲೇಜಿನ ಎನ್.ಎಸ್. ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಅ.19 ರಂದು ನಡೆಯಿತು.

ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಿದ್ದು, ಅಕ್ಷಯ ಕಾಲೇಜಿನ ಕ್ಯಾಂಪಸ್‌ ನಿಂದ ಸಂಪ್ಯ ಠಾಣೆಯವರೆಗೆ ಸ್ವಚ್ಚತಾ ಅಭಿಯಾನ ನಡೆಯಿತು.

ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್  ನಡುಬೈಲು, ಆರ್ಯಾಪು ಪಂಚಾಯತ್ ಪಿಡಿಒ ನಾಗೇಶ್, ಸಂಪ್ಯ ಆರಕ್ಷಕ ಠಾಣೆಯ ಉಪ ನಿರೀಕ್ಷಕ ರಾಮಕೃಷ್ಣ, ಸಿಬ್ಬಂದಿಗಳಾದ ಕಾರ್ತಿಕ್, ಹಾಗೂ ಭವಾನಿ, ಕಾಲೇಜಿನ ಪ್ರಾಂಶುಪಾಲರಾದ ಸಂಪತ್  ಪಕ್ಕಳ, ಆಡಳಿತ ಅಧಿಕಾರಿ ಅರ್ಪಿತ್ ಎ, ರಾ.ಸೇ. ಯೋ ಕಾರ್ಯಕ್ರಮ ಅಧಿಕಾರಿ ಕಿಶೋರ್ ರೈ ಮತ್ತು ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಾಗೂ ರಾ.ಸೇ.ಯೋನ  ಸ್ವಯಂ ಸೇವಕರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here