ಈಜು ಸ್ಪರ್ಧೆಯಲ್ಲಿ ಸಾಂದೀಪನಿ ಶಾಲೆಯ ಅಮನ್ ರಾಜ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ಬಸವನಗುಡಿ ಆಕ್ವಾಟಿಕ್ ಸೆಂಟರ್ ನಲ್ಲಿ ಅಕ್ಟೋಬರ್ 12 ಮತ್ತು 13 ರಂದು ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಅಮನ್ ರಾಜ್ 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಪುರುಷರಕಟ್ಟೆ ಸಾಂದೀಪನಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು ದರ್ಬೆ ಬೈಪಾಸ್ ನಿವಾಸಿ ರಾಜೇಶ್ ಮತ್ತು ಅಶ್ವಿನಿ ರಾಜೇಶ್ ದಂಪತಿಯ ಪುತ್ರ. ಇವರು ಪುತ್ತೂರು ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಪುತ್ತೂರು ಆಕ್ವಾ ಟಿಕ್ ಕ್ಲಬ್ ನಲ್ಲಿ ತರಬೇತುದಾರರಾದ ಪಾರ್ಥ ವಾರಣಾಸಿ, ದೀಕ್ಷಿತ್, ರೋಹಿತ್ ಮತ್ತು ನಿರೂಪ್ ರಿಂದ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here