ಕಡಬ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಡಬ ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಶಿಲ್ಪಾ ನಿಧನ

0

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಲ್ಪಾ( 33 ವ)ಮೆದುಳಿನ ನರ ದೌರ್ಬಲ್ಯದಿಂದ ಬೆಂಗಳೂರಿನಲ್ಲಿ ಅ.20ರಂದು ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿ ದೇವರಾಜ್ ಹಾಗೂ ಜಾನಕಿ ದಂಪತಿಗಳ ಪುತ್ರಿ ಯಾಗಿರುವ ಅವರು ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರು. ಐವರು ಪುತ್ರಿಯರಲ್ಲಿ ಕೊನೆಯವಳಾದ ಶಿಲ್ಪಾ ಮನೆಗೆ ಆಧಾರವಾಗಿದ್ದರು.

ಕಳೆದ 9 ತಿಂಗಳಿನಿಂದ ಮೆದುಳಿನ ನರ ದೌರ್ಬಲ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಇವರ ಚಿಕಿತ್ಸೆಗಾಗಿ ಹಲವು ಸಂಘ-ಸಂಸ್ಥೆಯವರು ಸ್ವಯಂ ಪ್ರೇರಣೆಯಿಂದ ಸಹಾಯ ಮಾಡಿದ್ದರು. ಇವರ ನಿಧನಕ್ಕೆ ಯೋಜನೆಯ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here