ಅ.22,23: ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗ ಸುಳ್ಯಪದವು ಇದರ ಆಶ್ರಯದಲ್ಲಿ ಯುವಶಕ್ತಿ ಉತ್ಸವ

0

ಪುತ್ತೂರು: ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗ ಸುಳ್ಯಪದವು ಇದರ ಆಶ್ರಯದಲ್ಲಿ ಯುವಶಕ್ತಿ ಉತ್ಸವ ಅ.22 ಮತ್ತು 23ರಂದು ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅ.22ರಂದು ಬೆಳಗ್ಗಿನಿಂದ ಆಹ್ವಾನಿತ 12 ತಂಡಗಳ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಬಿಎಸ್‌ಎನ್‌ಎಲ್ ಉದ್ಯೋಗಿ ಗಣೇಶ್ ರೈ ಮುಂಡಾಸು ಪಂದ್ಯಾಟ ಉದ್ಘಾಟಿಸಲಿದ್ದಾರೆ.
ಯುವಶಕ್ತಿ ಉತ್ಸವ ಅ.23ರಂದು ಬೆಳಿಗ್ಗೆ ಉದ್ಘಾಟನೆಗೊಳ್ಳಲಿದ್ದು ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಗಳ ಅಧ್ಯಕ್ಷ ಶಿವರಾಮ ಹೆಚ್.ಡಿ ಉದ್ಘಾಟಿಸಲಿದ್ದಾರೆ. ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗ ಸುಳ್ಯಪದವು ಇದರ ಗೌರವಾಧ್ಯಕ್ಷ ಗೋಪಾಲಕೃಷ್ಣ ಬಟ್ಟಂಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಗುರುವಂದನೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗ ಸುಳ್ಯಪದವು ಇದರ ಅಧ್ಯಕ್ಷ ಗುರುಕಿರಣ್ ರೈ ಎನ್ ಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗ ಸುಳ್ಯಪದವು ಇದರ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here