ಪುಣ್ಚತ್ತಾರು ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‌ನ ದಶಮ ಪರ್ವ ಕಾರ್ಯಕ್ರಮಕ್ಕೆ ಚಾಲನೆ

0

ಕಾಣಿಯೂರು: ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ದಶಮಾನೋತ್ಸವ ಪ್ರಯುಕ್ತ ದಶಮ ಪರ್ವ ಮತ್ತು ದೀಪಾವಳಿ ಪ್ರಯುಕ್ತ ಆಯ್ದ ಸ್ಥಳೀಯ ಆಟಗಾರರ ನಿಗದಿತ ಹತ್ತು ತಂಡಗಳ ಪ್ರೋ ವಾಲಿಬಾಲ್ ಪಂದ್ಯಾಟ, ಆಹ್ವಾನಿತ ತಂಡಗಳ ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮತ್ತು ಅಶಕ್ತ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ ೨೩ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ನಿವೃತ್ತ ಯುವಜನ ಸೇವಾ ಕ್ರೀಡಾಧಿಕಾರಿ ಬಿ.ಕೆ. ಮಾಧವ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣ್ಚತ್ತಾರು ಶ್ರೀಹರಿ ಭಜನಾ ಮಂಡಳಿಯ ಗೌರವಾಧ್ಯಕ್ಷ ನಾರಾಯಣ ಗೌಡ ಇಡ್ಯಡ್ಕ ವಹಿಸಿದ್ದರು. ಪಂಜ ವಲಯ ಉಪವಲಯ ಅರಣ್ಯಾಧಿಕಾರಿ ಯಶೋಧರ, ಪುಣ್ಚತ್ತಾರು ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‌ನ ಗೌರವಾಧ್ಯಕ್ಷ ಮೋಹನ ಗೌಡ ಇಡ್ಯಡ್ಕ, ಪೈಕ ಕರಿಮಜಲು ಗ್ರಾಮ ದೈವಸ್ಥಾನದ ಅಧ್ಯಕ್ಷ ಪುಟ್ಟಣ್ಣ ಗೌಡ ಪೈಕ, ಪುಣ್ಚತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮಾಳ, ಶ್ರೀ ಹರಿ ಭಜನಾ ಮಂಡಳಿ ಪುಣ್ಚತ್ತಾರು ಇದರ ಅಧ್ಯಕ್ಷ ಸುಂದರ ನಾಯ್ಕ ಉಪ್ಪಡ್ಕ, ನಾವೂರು ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಅಧ್ಯಕ್ಷ ರವಿಶಂಕರ ಎನ್.ಟಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ನ ಸವಣೂರು ವಲಯ ಮೇಲ್ವೀಚಾರಕಿ ಪ್ರೇಮಾ, ಪುಣ್ಚತ್ತಾರು ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷ ರಾಧಾಕೃಷ್ಣ ಪೈಕ, ಅಧ್ಯಕ್ಷ ಹರೀಶ್ ಕಟೀಲ್ ಪೈಕ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕೋಶಾಧಿಕಾರಿ ಮಾಧವ ಕಲ್ಪಡ, ಜತೆ ಕಾರ್ಯದರ್ಶಿ ಮಿಥುನ್ ಪೈಕ, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಪೈಕ ಹಾಗೂ ತಂಡಗಳ ಪ್ರಾಯೋಜಕರು ಉಪಸ್ಥಿತರಿದ್ದರು. ಕ್ಲಬ್‌ನ ಸದಸ್ಯ ದಿನೇಶ್ ಮಾಳ ಸ್ವಾಗತಿಸಿ, ಚಂದ್ರಶೇಖರ ಮುಂಡಾಳ ವಂದಿಸಿದರು. ಶಿಕ್ಷಕ ಗಣೇಶ್ ನಡುವಾಲ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ಥಳಿಯ ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು

ಅ.24ರಂದು ಪುಣ್ಚತ್ತಾರಿನಲ್ಲಿ…

ಅ ೨೪ರಂದು ಬೆಳಿಗ್ಗೆ ಪ್ರೋ ವಾಲಿಬಾಲ್ ಮತ್ತು ಆಹ್ವಾನಿತ ತಂಡಗಳ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದು, ಸಂಜೆ ಸಮಾರೋಪ ಸಮಾರಂಭ, ವಿವಿಧ ಸಾಧಕರಿಗೆ ಸನ್ಮಾನ, ಅಶಕ್ತ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾಸಂಗಮ ಕಲಾವಿದರಿಂದ ಶಿವದೂತೆ ಗುಳಿಗೆ ನಾಟಕ ನಡೆಯಲಿದೆ.

LEAVE A REPLY

Please enter your comment!
Please enter your name here