ಬೆಟ್ಟಂಪಾಡಿ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಹಾಸಭೆ – ಪದಾಧಿಕಾರಿಗಳ ಆಯ್ಕೆ

0

ಗೌರವಾಧ್ಯಕ್ಷ : ಮನಮೋಹನ ರೈ, ಅಧ್ಯಕ್ಷ: ಪ್ರಭಾಕರ ರೈ, ಕಾರ್ಯದರ್ಶಿ: ಧನಂಜಯ, ಕೋಶಾಧಿಕಾರಿ: ರಂಜಿತ್ ಟಿ.

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಯ ವಾರ್ಷಿಕ ಮಹಾಸಭೆ ಸಮಿತಿಯ ಗೌರವಾಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕರವರ ಅಧ್ಯಕ್ಷತೆಯಲ್ಲಿ ಅ. 16 ರಂದು ದೇವಳದಲ್ಲಿ ನಡೆಯಿತು. ನಿರ್ಗಮಿತ ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ ಸ್ವಾಗತಿಸಿ, 37 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ 38 ನೇ ವರ್ಷದ ಗಣೇಶೋತ್ಸವದ ಸಲುವಾಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಧಿಕಾರ ಹಸ್ತಾಂತರಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಮನಮೋಹನ ರೈ ಚೆಲ್ಯಡ್ಕ ಮರು ಆಯ್ಕೆಯಾದರು. ಅಧ್ಯಕ್ಷರಾಗಿ ಪ್ರಭಾಕರ ರೈ ಬಾಜುವಳ್ಳಿ, ಕಾರ್ಯದರ್ಶಿಯಾಗಿ ಧನಂಜಯ ರೆಂಜ, ಕೋಶಾಧಿಕಾರಿಯಾಗಿ ರಂಜಿತ್ ತಲೆಪ್ಪಾಡಿ ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ನಿರ್ಗಮಿತ ಅಧ್ಯಕ್ಷ ಸೀತಾರಾಮ ಗೌಡ, ಕೋಶಾಧಿಕಾರಿ ಪ್ರವೀಣ್ ಕರ್ನಪ್ಪಾಡಿ ಅಧಿಕಾರ ಹಸ್ತಾಂತರಿಸಿದರು.

ಸಂಚಾಲಕ ಡಾ. ಸುಬ್ರಹ್ಮಣ್ಯ ವಾಗ್ಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯದರ್ಶಿ ಧನಂಜಯ ರೆಂಜ‌ ವಂದಿಸಿದರು.

LEAVE A REPLY

Please enter your comment!
Please enter your name here