ಅ.25ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ

0

ಪುತ್ತೂರು: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಲಿದೆ.
ಸ್ವಾತಿ, ಚಿತ್ರಾ, ವಿಶಾಖ, ಅನುರಾಧ, ಜ್ಯೇಷ್ಟ, ಕೃತಿಕಾ, ರೋಹಿಣಿ, ಮೃಗಶಿರ, ಪೂರ್ವಭಾದ್ರ, ಉತ್ತರಾಭಾದ್ರ, ರೇವತಿ ನಕ್ಷತ್ರದವರಿಗೆ ಗ್ರಹಣ ದೋಷವಿದೆ. ಗ್ರಹಣ ಶಾಂತಿ ಹೋಮ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ರಶೀದಿ ಪಡೆದು, ಸಂಜೆ ಗಂಟೆ 5.09ಕ್ಕೆ ಪ್ರಾರಂಭಗೊಳ್ಳುವ ಗ್ರಹಣ ಶಾಂತಿ ಹೋಮದಲ್ಲಿ ಪಾಲ್ಗೊಳ್ಳುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here