ಕಾರು ಡಿಕ್ಕಿಯಾಗಿ ಗಾಯಗೊಂಡ ವೃದ್ಧೆ ಚಿಂತಾಜನಕ !

0

ಪುತ್ತೂರು: ಏಳ್ಮುಡಿಯಲ್ಲಿ ಕಾರು ಡಿಕ್ಕಿಯಾಗಿ ತಲೆಗೆ ಗಾಯಗೊಂಡಿದ್ದ ಮಹಿಳೆ ಮಂಗಳೂರು ಅಸ್ಪತ್ರೆಯಲ್ಲಿ ದಾಖಲಾಗಿದ್ದು, ಇದೀಗ ಅವರು ಚಿಂತಾಜನಕ ಸ್ಥಿತಿಯಲ್ಲಿ ಇದ್ದಾರೆಂದು ತಿಳಿದು ಬಂದಿದೆ.

ಅ.23ರಂದು ಸಾಮೆತ್ತಡ್ಕ ನಿವಾಸಿ ಮನ್ಸೆತ್ತಿ(83ವ)ರವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಅವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ತಲೆಗೆ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮನ್ಸೆತ್ತಿ ಅವರು ವೀಳ್ಯದೆಲೆ ತರಲು ಪೇಟೆಗೆ ಬಂದಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ಸಂದರ್ಭದಲ್ಲಿ ಕಾರನ್ನು ಹಠತ್ ನಿಲ್ಲಿಸಿದ ಪರಿಣಾಮ ಕಾರಿನ ಹಿಂಬದಿಯಿಂದ ಸ್ಕೂಟರ್ ಕಾರಿಗೆ ಡಿಕ್ಕಿಯಾಗಿತ್ತು. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here