ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ‌ಶ್ರೀವರ್ಣ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ವತಿಯಿಂದ ಬಳ್ಳಾರಿಯಲ್ಲಿ ನಡೆದ ರಾಜ್ಯ ಹಾಗೂ ಸೌತ್ ಝೋನ್ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀವರ್ಣ ಪಿ.ಡಿ. ಅವರು ಚಿನ್ನದ ಪದಕದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಲಾಂಗ್ ಜಂಪ್, ಹೈಜಂಪ್ ಮತ್ತು 800 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟದಲ್ಲಿ ವೈಯುಕ್ತಿಕ ಚಾಂಪಿಯನ್ ಶಿಪ್ ಪಡೆದ ಶ್ರೀವರ್ಣರವರು ನವೆಂಬರ್ ತಿಂಗಳಲ್ಲಿ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿರುವ ಇವರು ಬೆಳ್ಳಿಪ್ಪಾಡಿ ಗ್ರಾಮದ ಪಾಲೆತ್ತಡಿ ನಿವಾಸಿಗಳಾದ ಧರ್ಣಪ್ಪ ಗೌಡ ಹಾಗೂ ಮಮತಾ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here