ಅ.27 :ನಾಣಿಲ- ಗುಜ್ಜರ್ಮೆ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

0

ಕಾಣಿಯೂರು: ರೂ 3 ಕೋಟಿ ಅನುದಾನದಲ್ಲಿ ಕಾಂಕ್ರೀಟೀಕರಣಗೊಂಡ ಬೈತಡ್ಕ- ಗುಜ್ಜರ್ಮೆ ರಸ್ತೆಯು ನಾಣಿಲ ಜಂಕ್ಷನ್‌ನಲ್ಲಿ ಅ 27 ರಂದು ಲೋಕಾರ್ಪಣೆಗೊಳ್ಳಲಿದೆ.

ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ಲಲಿತಾ ದರ್ಖಾಸು, ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಪುತ್ತೂರು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಶ್ರೀ ಕ್ಷೇತ್ರ ದೈಪಿಲ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರದೀಪ್ ಆರ್ ಗೌಡ, ನಾಣಿಲ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಉದ್ಲಡ್ಡ, ಕಾಣಿಯೂರು ಗ್ರಾ.ಪಂ.ಸದಸ್ಯರಾದ ವಿಶ್ವನಾಥ ಕೊಪ್ಪ, ಕೀರ್ತಿ ಕುಮಾರಿ ಅಂಬುಲ, ಗಂಗಮ್ಮ ಗುಜ್ಜರ್ಮೆ, ತೇಜ ಕುಮಾರಿ ಉದ್ಲಡ್ಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here